TOP AD

ರಾಜಕೀಯಕ್ಕೆ ಎಂಟ್ರಿ ಆಗ್ಬೇಕಾ? ಅದಕ್ಕೂ ಬರಲಿದೆ ಕೋರ್ಸ್! ಬೆಂಗಳೂರಿನಲ್ಲಿ ಮುಂದಿನ ವರ್ಷ ಶುರುವಾಗತ್ತೆ ರಾಜಕೀಯ ಪದವಿ ಕಾಲೇಜು

India:

Font size:

ರಾಜಕೀಯ ಅಧ್ಯಯನ ಆಸಕ್ತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ. ಬೆಂಗಳೂರಿನಲ್ಲಿ 2026ರ ಜೂನ್‌ನಲ್ಲಿ ರಾಜಕೀಯ ಪದವಿ ಕಾಲೇಜು ಆರಂಭಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಇದು ಮೂರು ವರ್ಷಗಳ ಕೋರ್ಸ್ ಆಗಿದ್ದು, ರಾಜಕೀಯ ನೀತಿ ಸಂಹಿತೆ ಮತ್ತು ಸಿದ್ಧಾಂತ ವಿಷಯಗಳನ್ನು ಒಳಗೊಂಡಿರುತ್ತದೆ. ಪಠ್ಯಕ್ರಮ ರೂಪಿಸಲು ನಿವೃತ್ತ ಪ್ರಾಧ್ಯಾಪಕರು ಹಾಗೂ ಹಿರಿಯ ರಾಜಕಾರಣಿಗಳ ಸಲಹೆ ಪಡೆಯಲಾಗುವುದು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಈ ರಾಜಕೀಯ ಪದವಿ ಮೂರು ವರ್ಷಗಳ ಕೋರ್ಸ್​​ ಆಗಿದ್ದು, ಇದರ ಪಠ್ಯಕ್ರಮವು ರಾಜಕೀಯ ನೀತಿ ಸಂಹಿತೆ ಮತ್ತು ಸಿದ್ಧಾಂತವನ್ನು ಒಳಗೊಂಡಿರುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಇನ್ನು ಇದರ ಪಠ್ಯಕ್ರಮವನ್ನು ಸಿದ್ಧಪಡಿಸುವಾಗ ನಿವೃತ್ತ ಪ್ರಾಧ್ಯಾಪಕರು, ಹಿರಿಯ ರಾಜಕಾರಣಿಗಳು ಮತ್ತು ರಾಜಕೀಯದ ಬಗ್ಗೆ ಜ್ಞಾನವಿರುವ ಸಾರ್ವಜನಿಕರ ಸಲಹೆಯನ್ನು ಪಡೆಯಲಾಗುವುದು. ಇನ್ನು ಒಂದು ತಿಂಗಳಲ್ಲಿ ಇದರ ಬಗ್ಗೆ ಸಂಪೂರ್ಣ ಚಿತ್ರಣ ಹೊರಬರಲಿದೆ ಎಂದು ಹೇಳಿದ್ದಾರೆ.
ಇನ್ನು ಈ ಬಗ್ಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಈ ವಿಚಾರವನ್ನು ಮುಖ್ಯಮಂತ್ರಿಗಳ ಬಳಿ ಪ್ರಸ್ತಾಪಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೂಡ ಯೋಜಿತ ಕಾಲೇಜಿಗೆ ಅನುದಾನ ನೀಡುವ ಭರವಸೆ ನೀಡಿದ್ದಾರೆ.ಇದೇ ವೇಳೆ ರಾಜ್ಯದಲ್ಲಿ 29,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ. 1,900 ಪ್ರಾಥಮಿಕ ಶಾಲೆಗಳಲ್ಲಿ 10 ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಾರೆ. ಅಧಿಕಾರದಲ್ಲಿರುವವರ ನಿರ್ಧಾರಗಳಿಂದಾಗಿ ಕನ್ನಡ ಮಾಧ್ಯಮ ಶಾಲೆಗಳು ದುರ್ಬಲವಾಗುತ್ತಿವೆ ಎಂದು ಹೇಳಿದ್ದಾರೆ.

Comments

Leave a Comment

Prev Post Weather Forecast: ರಾಜ್ಯದ 25 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ
Next Post Health Dept Jobs 2025: ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ

ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಮಹತ್ವದ ಸುಳಿವು ಕೊಟ್ಟ ಸಿಎಂ ಸಿದ್ದರಾಮಯ್ಯ

ಸರ್ಕಾರಿ ಜಾಗಗಳಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘದ ಚಟುವಟಿಕೆ ನಿಷೇಧ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಬರೆದ ಪತ್ರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿಗೆ ಕಾರಣವಾಗಿದೆ. ಈ ಬೆನ್ನಲ್ಲೇ ನಿಷೇಧ ಕುರಿತಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುಳಿವೊಂದನ್ನು ನೀಡಿದ್ದಾರೆ.

ಗುಜರಾತ್ ಹೊಸ ಕ್ಯಾಬಿನೆಟ್: ಹರ್ಷ್ ಸಾಂಘ್ವಿ ಅತ್ಯಂತ ಕಿರಿಯ ಡಿಸಿಎಂ; ರವೀಂದ್ರ ಜಡೇಜಾ ಪತ್ನಿ ಸೇರಿ 26 ಮಂತ್ರಿಗಳು

Gujarat cabinet reshuffle updates: ಗುಜರಾತ್ ಸಂಪುಟದ ಪುನಾರಚನೆ ನಡೆದಿದ್ದು, ಹಲವು ಹಾಲಿ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಸ್ಥಾನ ಕೊಡಲಾಗಿದೆ. ಸಿಎಂ ಭೂಪೇಂದ್ರ ಪಟೇಲ್ ನೇತೃತ್ವದ ಸಂಪುಟದಲ್ಲಿ 26 ಮಂದಿ ಸಚಿವರಿರಲಿದ್ದಾರೆ. ಇದರಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಕೂಡ ಇದ್ದಾರೆ. ಇಂದೇ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Read all News
AD 5